ಆಸೀಸ್ ವಿರುದ್ಧ ಅಂತಿಮ 2 ಪಂದ್ಯಕ್ಕೆ ಭಾರತ ತಂಡ ಆಯ್ಕೆ

Update: 2017-09-25 18:20 GMT

ಹೊಸದಿಲ್ಲಿ, ಸೆ.25: ಆಸ್ಟ್ರೇಲಿಯ ವಿರುದ್ಧ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಆರಂಭಿಕ ಆಟಗಾರ ಶಿಖರ್ ಧವನ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.

ತನ್ನ ಪತ್ನಿ ಅನಾರೋಗ್ಯಕ್ಕೆ ಈಡಾದ ಹಿನ್ನೆಲೆಯಲ್ಲಿ ಆಸೀಸ್ ವಿರುದ್ಧ ಏಕದಿನ ಸರಣಿ ಆರಂಭಕ್ಕೆ ಮೊದಲೇ ಧವನ್ ತಂಡವನ್ನು ತೊರೆದಿದ್ದರು. ಬಿಸಿಸಿಐ ಈತನಕ ಧವನ್ ಬದಲಿಗೆ ಆಟಗಾರರನ್ನು ನೇಮಿಸಿಲ್ಲ. ಮೊದಲ ಏಕದಿನ ಪಂದ್ಯಕ್ಕೆ ಮೊದಲು ಫುಟ್ಬಾಲ್ ಪಂದ್ಯವನ್ನಾಡುತ್ತಿದ್ದಾಗ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್‌ಗೆ ಗಾಯವಾಗಿತ್ತು. ಪಟೇಲ್ 15 ಸದಸ್ಯರ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದು, ರವೀಂದ್ರ ಜಡೇಜರಿಂದ ತೆರವಾದ ಸ್ಥಾನ ತುಂಬಲಿದ್ದಾರೆ. ಈಗಾಗಲೇ ಏಕದಿನ ಸರಣಿಯಲ್ಲಿ 3-0 ಮುನ್ನಡೆಯಲ್ಲಿರುವ ಭಾರತ ಸೆ.28 ರಂದು ಬೆಂಗಳೂರಿನಲ್ಲಿ 4ನೆ ಪಂದ್ಯವನ್ನು ಆಡಲಿದೆ.

ಭಾರತ ತಂಡ

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮ, ಕೆ.ಎಲ್. ರಾಹುಲ್, ಮನೀಷ್ ಪಾಂಡೆ, ಕೇದಾರ್ ಜಾಧವ್, ಅಜಿಂಕ್ಯ ರಹಾನೆ, ಎಂಎಸ್ ಧೋನಿ(ವಿಕೆಟ್‌ಕೀಪರ್) , ಹಾರ್ದಿಕ್ ಪಾಂಡ್ಯ, ಕುಲ್‌ದೀಪ್ ಯಾದವ್, ಯುಜುವೇಂದ್ರ ಚಹಲ್, ಜಸ್‌ಪ್ರಿತ್ ಬುಮ್ರಾ, ಭುವನೇಶ್ವರ ಕುಮಾರ್, ಉಮೇಶ್ ಯಾದವ್, ಮುಹಮ್ಮದ್ ಶಮಿ, ಅಕ್ಷರ್ ಪಟೇಲ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News