ಮನೆ ಬೀಗ ಮುರಿದು ನಗನಾಣ್ಯ ಕಳವು

Update: 2017-09-25 18:28 GMT

ಶಿವಮೊಗ್ಗ, ಸೆ. 25: ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು, ಸಾವಿರಾರು ರೂ. ಮೌಲ್ಯದ ನಗನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‍ಪೇಟೆಯಲ್ಲಿ ವರದಿಯಾಗಿದೆ. 

ಸಾಗರ ರಸ್ತೆಯ ವಿನಾಯಕ ನಗರದ ನಿವಾಸಿ ರೇಖಾ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಸುಮಾರು 50 ಸಾವಿರ ರೂ. ಮೌಲ್ಯದ ಮಾಂಗಲ್ಯ ಸರ ಹಾಗೂ ನಗದನ್ನು ಕಳ್ಳರು ಅಪಹರಿಸಿದ್ದಾರೆ.

ಈ ಸಂಬಂಧ ರಿಪ್ಪನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News