ಟೀಕೆಗೆ ಉತ್ತರ ಜನರೇ ಕೊಡುತ್ತಾರೆ: ದೇವೇಗೌಡ ತಿರುಗೇಟು

Update: 2017-09-25 18:39 GMT

ಮಂಡ್ಯ, ಸೆ.25: ಬಿಜೆಪಿ, ಸಿದ್ದರಾಮಯ್ಯ ಮಾಡುತ್ತಿರುವ ಟೀಕೆಗಳಿಗೆ ಮುಂದಿನ ಚುನಾವಣೆಯಲ್ಲಿ ಮತದಾರರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿರುಗೇಟು ನೀಡಿದ್ದಾರೆ.

ಸೋಮವಾರ ನಗರದಲ್ಲಿ ನಡೆದ ಎಚ್.ಡಿ.ಚೌಡಯ್ಯ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಣ್ಣಿನ ಮಗನೆಂದು ತನ್ನನ್ನು ಜನರೇ ಕರೆಯುತ್ತಾರೆ. ಅದು ನಾನು ತಗಲಿಸಿಕೊಂಡ ಬಿರುದಲ್ಲ. ಈ ಕಾರಣಕ್ಕೆ ಈ ಬಗೆಗಿನ ಅವಹೇಳನಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಇನ್ನೂ ಇತ್ಯರ್ಥವಾಗಿಲ್ಲವೆಂದೂ ಸ್ಪಷ್ಟಪಡಿಸಿದ ಅವರು, ಸದ್ಯದಲ್ಲಿಯೇ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವುದಾಗಿ ತಿಳಿಸಿದರು.

ಕುಮಾರಸ್ವಾಮಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಅವರ ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲಿಯೇ ಚುನಾವಣಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸಮಾರಂಭ ಪೂರ್ಣಗೊಂಡ ನಂತರ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಮದ್ದೂರು ಪ್ರವಾಸಿಮಂದಿರದಲ್ಲಿ ವಿಶ್ರಾಂತಿ ಸಮಯವನ್ನು ‘ವಾರ್ತಾಭಾರತಿ’ ಪತ್ರಿಕೆ ವಾಚನಕ್ಕೆ ವಿನಿಯೋಗಿಸಿದ ದೇವೇಗೌಡರು, ಪತ್ರಿಕೆಯ ಧ್ಯೇಯೋದ್ದೇಶಗಳು ಜನಪರವಾಗಿವೆ ಎಂದು ಕೊಂಡಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News