ಎರ್ಮಾಳು: ರೈಲು ಹಳಿಯಲ್ಲಿ ಮೃತದೇಹ ಪತ್ತೆ

Update: 2017-09-26 05:20 GMT

ಪಡುಬಿದ್ರೆ, ಸೆ.26: ಎರ್ಮಾಳು ಪೂಂದಾಡು ಅದಮಾರು ಮಠದ ಬಳಿ ರೈಲ್ವೇ ಹಳಿಯಲ್ಲಿ ಇಂದು ಬೆಳಗ್ಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಅದಮಾರು ಮಠದ ಬಳಿ ನಿವಾಸಿ, ಕೂಲಿ ಕಾರ್ಮಿಕ ರವಿ ದೇವಾಡಿಗ (50) ಎಂದು ಗುರುತಿಸಲಾಗಿದೆ.

ಸೋಮವಾರ ಮಧ್ಯಾಹ್ನ ಮನೆಯಿಂದ ಹೊರಟಿದ್ದ ರವಿ ದೇವಾಡಿಗ ರಾತ್ರಿಯಾದರೂ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಆದರೆ ಇಂದು ಬೆಳಗ್ಗೆ ಅವರ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.                        

ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ದಾಖಲಿಸಿ ಮೃತದೇಹವನ್ನು ಮಹಜರಿಗಾಗಿ ಪಡುಬಿದ್ರೆ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News