ಈಜಲು ಹೋದ ವಿದ್ಯಾರ್ಥಿ ಮೃತ್ಯು

Update: 2017-09-26 14:15 GMT

ನಾಗಮಂಗಲ, ಸೆ.26: ಈಜಲು ಹೋದ ವಿದ್ಯಾರ್ಥಿಯೊಬ್ಬ ಕೊಳದಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದ ಬೆಟ್ಟದ ತಪ್ಪಲಿನಲ್ಲಿರುವ ಲಿಂಗಣ್ಣನ ಕೊಳದಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಬಾಣಸವಾಡಿ ನಿವಾಸಿ ಶ್ರೀನಿವಾಸ್‍ರವರ ಪುತ್ರ ವೆಂಕಟೇಶ್(16) ಸಾವನ್ನಪ್ಪಿದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಶ್ರೀಗಂಗಾಧರೇಶ್ವರ ವಿದ್ಯಾರ್ಥಿನಿಲಯದಲ್ಲಿ ವಾಸ್ತವ್ಯದ್ದ ವೆಂಕಟೇಶ್, ಸೆ.24ರ ಮಧ್ಯಾಹ್ನ ಸ್ನೇಹಿತರೊಂದಿಗೆ ಈಜಲು ತೆರಳಿ ಕೊಳದಲ್ಲಿ ಮುಳುಗಿದ್ದು, ಆತನ ಶವ ಸೋಮವಾರ ಸಂಜೆ ಪತ್ತೆಯಾಗಿದೆ.

ಈ ಸಂಬಂಧ ಬೆಳ್ಳೂರು ಪೊಲೀಸರು ತನಿಖೆ ಕೈಗೊಂಢಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News