ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-09-26 15:46 GMT

ಕಾರ್ಕಳ, ಸೆ.26: ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದ ಕಾರ್ಕಳ ಜ್ಯೋತಿ ನಗರದ ಜ್ಞಾನಶೇಖರ ಶೆಟ್ಟಿ(62) ಎಂಬವರು ಸೆ.26ರಂದು ಮಧ್ಯಾಹ್ನ ಮನೆಯ ಮಾಳಿಗೆಯ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ:  ವಿಪರೀತ ಅಮಲು ಪದಾರ್ಥ ಸೇವನೆಯ ಚಟದಿಂದ ಸೆ.23 ರಂದು ಮನೆಯ ಕೋಣೆಯೊಳಗೆ ಚಿಲಕ ಹಾಕಿಕೊಂಡು ಚೂರಿಯಿಂದ ಕತ್ತು ಹಾಗೂ ಹೊಟ್ಟೆಯ ಭಾಗಕ್ಕೆ ಇರಿದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಂಪಳ್ಳಿ ಗ್ರಾಮ ಪುಣಚ್ಚೂರು ಕಂಬಳ ಮಜಲು ನಿವಾಸಿ ಶಂಕರ ನಾಯ್ಕ ಎಂಬವರು ಸೆ.26 ರಂದು ಬೆಳಗ್ಗೆ 6:30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News