ಬನಾರಸ್ ಹಿಂದೂ ವಿವಿ ಘಟನೆಯ ಹಿಂದೆ ಸಮಾಜವಿರೋಧಿ ಶಕ್ತಿಗಳ ಪಿತೂರಿ: ಆದಿತ್ಯನಾಥ್

Update: 2017-09-27 12:51 GMT

ಉತ್ತರಪ್ರದೇಶ, ಸೆ.27: ಬನಾರಸ್ ಹಿಂದೂ ವಿವಿಯಲ್ಲಿ ನಡೆದ ಇತ್ತೀಚಿನ ಘಟನೆಗಳ ಹಿಂದೆ ‘ಪಿತೂರಿ’ಯಿದೆ. ಇದರ ಹಿಂದೆ ಸಮಾಜವಿರೋಧಿ ಶಕ್ತಿಗಳು ಕೆಲಸ ಮಾಡಿದೆ ಎಂದು ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ಹೇಳಿದ್ದಾರೆ.

ಈ ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಹಾಗೂ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸದಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದವರು ಹೇಳಿದರು.

ವಿದ್ಯಾರ್ಥಿನಿಯೊಬ್ಬಳಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ್ದನ್ನು ವಿರೋಧಿಸಿ ಬನಾರಸ್ ಹಿಂದೂ ವಿವಿಯ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆ ಆನಂತರ ವಿಕೋಪಕ್ಕೆ ತಿರುಗಿತ್ತು. ಈ ಸಂದರ್ಭ ಪೊಲೀಸರು ನಡೆಸಿದ್ದ ಲಾಠಿಚಾರ್ಜ್ ನಲ್ಲಿ ಹಲವು ವಿದ್ಯಾರ್ಥಿಗಳು, ಇಬ್ಬರು ಪತ್ರಕರ್ತರು ಹಾಗೂ ಮಹಿಳೆಯರು ಗಾಯಗೊಂಡಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News