ಅಂಗನವಾಡಿ ಶಿಕ್ಷಕಿ ಆತ್ಮಹತ್ಯೆ
Update: 2017-09-27 14:46 GMT
ಭಟ್ಕಳ, ಸೆ. 27: ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾದ ಅಂಗನವಾಡಿ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ತೂದಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯನ್ನು ಶಾರದಾ ರಾಘವೇಂದ್ರ ನಾಯ್ಕ(32) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು ನಿರಂತರ ಅನಾರೋಗ್ಯದಿಂದ ಬಳತ್ತಿರುವುದು ಇವರ ಆತ್ಮಹತ್ಯೆಗೆ ಕಾರಣವಾಗಿರಬಹುದೆಂದು ಅಂದಾಜಿಸಲಾಗಿದ್ದು, ತನಿಖೆಯ ನಂತರವೇ ವಿಷಯ ಬಹಿರಂಗವಾಗಲಿದೆ ಎಂದಿದ್ದಾರೆ. ಈ ಬಗ್ಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.