ಜಯ ಸಾವಿನ ಪ್ರಕರಣ: ಮೂರು ತಿಂಗಳಲ್ಲಿ ವರದಿ ಸಲ್ಲಿಕೆ

Update: 2017-09-28 18:29 GMT

 ಚೆನ್ನೈ, ಸೆ.28: ಮಾಜಿ ಮುಖ್ಯಮಂತ್ರಿ ಜಯಲಲಿತಾರ ಸಾವಿನ ಕುರಿತು ತನಿಖೆ ನಡೆಸಲು ರಾಜ್ಯ ಸರಕಾರ ನೇಮಿಸಿರುವ ತನಿಖಾ ಸಮಿತಿ ಮೂರು ತಿಂಗಳಲ್ಲಿ ವರದಿ ಸಲ್ಲಿಸಲಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.

   2016ರ ಸೆ.22ರಂದು ಜಯಲಲಿತಾರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ಸಂದರ್ಭ ಹಾಗೂ ಸನ್ನಿವೇಶ , ಹಾಗೂ 2016ರ ಡಿಸೆಂಬರ್ 5ರಂದು ಅವರು ನಿಧನರಾಗುವವರೆಗೆ ಅವರಿಗೆ ಆಸ್ಪತ್ರೆಯಲ್ಲಿ ಒದಗಿಸಲಾಗಿದ್ದ ಚಿಕಿತ್ಸಾ ಸೌಲಭ್ಯದ ಕುರಿತು ಸಮಿತಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ಸರಕಾರಕ್ಕೆ ತಮಿಳು ಹಾಗೂ ಇಂಗ್ಲಿಷ್ ಭಾಷೆಯಲ್ಲಿ ವರದಿಯನ್ನು ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

 ರಾಜ್ಯ ಸರಕಾರ ಜಯಾ ಸಾವಿನ ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ಸೋಮವಾರ ನೇಮಕಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News