ಅ.3: ಬ್ಯಾರಿ ಭಾಷಾ ದಿನಾಚರಣೆ

Update: 2017-09-29 06:22 GMT

ಮಂಗಳೂರು, ಸೆ.29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ನಗರದ ಅತ್ತಾವರದಲ್ಲಿರುವ ಬ್ಯಾರಿ ಸಾಹಿತ್ಯ ಅಕಾಡಮಿಯ ಕಚೇರಿಯಲ್ಲಿ ಅ.3ರಂದು ಬೆಳಗ್ಗೆ ಗಂಟೆ 10ಕ್ಕೆ ‘ಬ್ಯಾರಿ ಭಾಷಾ ದಿನಾಚರಣೆ’ ಕಾರ್ಯಕ್ರಮವು ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಎಚ್. ಖಾದರ್‌ರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷರಾದ ಎಂ.ಬಿ. ಅಬ್ದುಲ್ ರಹ್‌ಮಾನ್, ರಹೀಂ ಉಚ್ಚಿಲ್, ನಿಕಟ ಪೂರ್ವ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಸಾಹಿತಿ ಮತ್ತು ಸಂಶೊಧಕ ಪ್ರೊ.ಬಿ.ಎಂ. ಇಚ್ಲಂಗೋಡು, ಅಬ್ದುಲ್ ಬಶೀರ್ ಬೈಕಂಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News