×
Ad

ಬೈಲೂರು ವಾರ್ಡ್‌ನ ಕಾಂಗ್ರೆಸ್ ಕಾರ್ಯಕರ್ತರ ಸಭೆ

Update: 2017-09-30 21:28 IST

ಉಡುಪಿ, ಸೆ.30: ಉಡುಪಿ ನಗರಸಭೆಯ 31ನೇ ಬೈಲೂರು ವಾರ್ಡ್‌ನ ಬೂತ್ ಸಂಖ್ಯೆ 194ರ ಕಾಂಗ್ರೆಸ್ ಕಾರ್ಯಕರ್ತರ ಸಭೆ  ಅ.1ರ ಸಂಜೆ 4:30ಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಉಡುಪಿ ಚಿಟ್ಪಾಡಿ ಶಾರದಾಂಬ ದೇವಸ್ಥಾನದ ಸಭಾಂಗಣದಲ್ಲಿ ನಡೆಯ ಲಿರುವ ಈ ಸಭೆಯಲ್ಲಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತ ರಿದ್ದು ಪಕ್ಷ ಸಂಘಟನೆಯ ಕುರಿತು ಮಾರ್ಗದರ್ಶನ ನೀಡಲಿರುವರು. ಪಕ್ಷದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿರುವ ಈ ಸಭೆಯಲ್ಲಿ ಬೂತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕಾಂಗ್ರೆಸ್ ಮುಖಂಡ, ನಗರಸಭಾ ಸದಸ್ಯ ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News