ಯಕ್ಷ ಕಲಾವಿದ ಚಿಟ್ಟಾಣಿ ಅಸ್ವಸ್ಥ: ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ

Update: 2017-10-01 17:59 GMT

ಉಡುಪಿ, ಅ.1: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರು ಉಸಿರಾಟದ ತೊಂದರೆಯಿಂದ ಅಸ್ವಸ್ಥರಾಗಿದ್ದು, ಎರಡು ದಿನಗಳ ಹಿಂದೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗುಡ್ಡೆಕೇರಿಯ 85ರ ಹರೆಯದ ಚಿಟ್ಟಾಣಿ ಅವರು ಕರಾವಳಿ ಜಿಲ್ಲೆಯ ಜನಪ್ರಿಯ ಯಕ್ಷಗಾನ ಕಲಾವಿದರಾಗಿದ್ದು, ನ್ಯುಮೋನಿಯಾ ಹಾಗೂ ಲಘು ಪಾರ್ಶ್ವವಾಯುವಿನಿಂದ ಬಳಲುತಿದ್ದಾರೆ ಎಂದು ತಿಳಿದುಬಂದಿದೆ. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತಿದ್ದು, ಅವರು ಚಿಕಿತ್ಸೆಗೆ ಸ್ಪಂಧಿಸುತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತಿದ್ದ ಅವರನ್ನು ಕಳೆದ ಶುಕ್ರವಾರ ರಾತ್ರಿ ಕೆಎಂಸಿಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News