×
Ad

ವಾಹನ ಢಿಕ್ಕಿ: ಅಪರಿಚಿತ ಮೃತ್ಯು

Update: 2017-10-02 23:07 IST

ಪುತ್ತೂರು, ಅ. 2: ಪುತ್ತೂರು ನಗರದ ಹೊರವಲಯದ ಮುಕ್ರಂಪಾಡಿ ಸಮೀಪ ಮಾಣಿ ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕಳೆದ ಶನಿವಾರ ರಾತ್ರಿ  ವಾಹನವೊಂದು ಢಿಕ್ಕಿ ಹೊಡೆದು ಮೃತಪಟ್ಟ ಪಾದಚಾರಿ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಪುತ್ತೂರು ನಗರಸಭೆಯ ವ್ಯಾಪ್ತಿಯ ಮುಕ್ರಂಪಾಡಿ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಪಾದಚಾರಿಗೆ ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ  ವಾಹನವೊಂದು ಢಿಕ್ಕಿಯಾಗಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದರು. ಅವರ ಮೃತ ದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿ ಇರಿಸಲಾಗಿತ್ತು. ಆದರೆ ಮೃತನ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತ ದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ದು ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿ ಇರಿಸಲಾಗಿದೆ.

ಎಣ್ಣೆಕೆಂಪು ಬಣ್ಣ, ಸಾಧಾರಣ ಮೈಕಟ್ಟು ಹೊಂದಿರುವ, ಪಂಚೆ ತೊಟ್ಟಿದ್ದ ಈ ಅಪರಿಚಿತ ವ್ಯಕ್ತಿಯ ಕುರಿತು ಗುರುತು ಪತ್ತೆಯಾದಲ್ಲಿ ಪುತ್ತೂರು ನಗರ ಸಂಚಾರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08251-2385000 ಸಂಪರ್ಕಿಸುವಂತೆ ಪುತ್ತೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News