ಉ.ಪ್ರದೇಶ: ಬಿಜೆಪಿ ಕಾರ್ಯಕರ್ತನಿಗೆ ಗುಂಡೇಟು

Update: 2017-10-05 13:17 GMT

ಲಕ್ನೊ, ಅ.5: ಉತ್ತರಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ನಡೆದ ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

 ದೀಪಕ್ ಎಂಬ ಬಿಜೆಪಿ ಕಾರ್ಯಕರ್ತ ರಾತ್ರಿ ಮನೆಗೆ ವಾಪಸಾಗುತ್ತಿದ್ದಾಗ ಬೈಕಿನಲ್ಲಿ ಆಗಮಿಸಿದ ಮೂವರು ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ದೀಪಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ನಡೆಸಿದ್ದವರನ್ನು ಗುರುತಿಸಲಾಗಿದ್ದು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News