ಸಾಲಿಗ್ರಾಮದಲ್ಲಿ ಗಾಂಧೀ ಜಯಂತಿ ಆಚರಣೆ
Update: 2017-10-06 23:41 IST
ಉಡುಪಿ, ಅ.6: ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಪಟ್ಟಣ ಪಂಚಾಯತ್ ಅಧ್ಯಕ್ಷೆ ರತ್ನಾ ನಾಗರಾಜ ಗಾಣಿಗ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ.ರಾಜು ಪೂಜಾರಿ ಮಹಾತ್ಮರ ಚಿಂತನೆಗಳನ್ನು ಕೊಂಡಾಡಿದರು. ಉಪಾಧ್ಯಕ್ಷ ಉದಯ ಪೂಜಾರಿ, ಮಾಜಿ ಅಧ್ಯಕ್ಷೆ ಪಿ.ಸಾಧು, ಸದಸ್ಯರಾದ ಸಂಜೀವ ದೇವಾಡಿಗ, ರಾಘವೇಂದ್ರ ಗಾಣಿಗ, ಇಂದಿರಾ ಉಪಸ್ಥಿತರಿದ್ದರು.
ಚಂದ್ರಶೇಖರ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.