ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ

Update: 2017-10-08 14:26 GMT

ಬಂಟ್ವಾಳ, ಅ. 8: ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಬಂಟ್ವಾಳ ಸಮೀಪದ ಭಂಡಾರಿಬೆಟ್ಟುವಿನಲ್ಲಿ ರವಿವಾರ ಪತ್ತೆಯಾಗಿದೆ.

ಮೃತರನ್ನು ತಾಲೂಕಿನ ಅಜೆಕಲ ನಿವಾಸಿ ರವಿ (47) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಅವರು ಮನೆಗೂ ಹೋಗಿರಲಿಲ್ಲ ಎನ್ನಲಾಗಿದ್ದು, ಬೆಳಗ್ಗೆ ಭಂಡಾರಿಬೆಟ್ಟುವಿನ ಸೇತುವೆ ಪಕ್ಕದ ಪೊದೆಯಲ್ಲಿ ಮುಖ ಗಾಯಗೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತದೇಹದಲ್ಲಿ ಗಾಯದ ಗುರುತುಗಳಿದ್ದು, ಸಾವಿನ ಬಗ್ಗೆ ಸಾರ್ವಜನಿಕರಿಂದ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕಾಗಮಿಸಿದ ಬಂಟ್ವಾಳ ವೃತ್ತ ನಿರೀಕ್ಷಕ ಪ್ರಕಾಶ್ ಹಾಗೂ ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಸಂಬಂಧ ಮೃತರ ಸಹೋದರ ಕೊಲೆ ಶಂಕೆ ವ್ಯಕ್ತ ಪಡಿಸಿದ್ದು, ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News