ಕೈಕಂಬ : ರಸ್ತೆ ಅಪಘಾತಕ್ಕೆ ದ್ವಿಚಕ್ರ ವಾಹನ ಸವಾರ ಬಲಿ

Update: 2017-10-10 18:16 GMT

ಕೈಕಂಬ, ಅ.10: ಬೈಕ್, ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುಪುರ ಕೈಕಂಬದ ವಿಕಾಸ ನಗರದ ಬಳಿ ನಡೆದಿದೆ.

ಮೃತರನ್ನು ಮಳಲಿ ನಿವಾಸಿ ಭಾಸ್ಕರ್ (45) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News