ಗೋರಕ್ಷಣೆ ಹೆಸರಿನ ಹಿಂಸೆ, ದಲಿತರ ಮೇಲಿನ ದೌರ್ಜನ್ಯಗಳನ್ನು ನಾವು ವಿರೋಧಿಸುತ್ತೇವೆ

Update: 2017-10-15 08:45 GMT

ಗುಜರಾತ್, ಅ.15: ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆ ಹಾಗು ದಲಿತರ ಮೇಲಿನ ದೌರ್ಜನ್ಯಗಳನ್ನು ನಾವು ವಿರೋಧಿಸುತ್ತೇವೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.

“ಗೋರಕ್ಷಣೆಯ ಹೆಸರಿನಲ್ಲಿ ಹಿಂಸೆಯನ್ನು ನಡೆಸುವವರನ್ನು ನಾವು ಬೆಂಬಲಿಸುವುದಿಲ್ಲ. ಇಂತಹ ಘಟನೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ರೂಪಾನಿ ಹೇಳಿದ್ದಾರೆ.

“ಇದೇ ಸಂದರ್ಭ ನಮ್ಮ ಕಾನೂನಿನಂತೆ ಸರಕಾರ ಗೋವುಗಳ ರಕ್ಷಣೆ ಒದಗಿಸಲಿದೆ. ಇದರಲ್ಲಿ ಜೀವಾವಧಿ ಶಿಕ್ಷೆಗೂ ಸಹ ಅವಕಾಶವಿದೆ” ಎಂದವರು ಹೇಳಿದ್ದಾರೆ,

ದಲಿತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಮಾತನಾಡಿದ ಅವರು, “ಇದು ತಪ್ಪು. ಇಂತಹ ಪ್ರಕರಣಗಳಲ್ಲಿ ತಕ್ಷಣವೇ ಕೇಸು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು. ದಲಿತರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಆದ್ದರಿಂದ ದಲಿತರು ಬಿಜೆಪಿಯನ್ನು ಬೆಂಬಲಿಸುತ್ತಾರೆ” ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News