ಶಾಸಕರಿಗೆ ಚಿನ್ನದ ಬಿಸ್ಕತ್ ನೀಡುವ ಪ್ರಸ್ತಾಪವೆ ಇಲ್ಲ: ಸ್ಪೀಕರ್ ಕೆ.ಬಿ.ಕೋಳಿವಾಡ ಸ್ಪಷ್ಟನೆ
Update: 2017-10-16 13:00 GMT
ಬೆಂಗಳೂರು, ಅ. 16: ವಿಧಾನಸೌಧಕ್ಕೆ ಅರವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಜ್ರ ಮಹೋತ್ಸವ ಆಚರಣೆ ಮಾಡುತ್ತಿದ್ದು, ಆ ನೆನಪಿಗಾಗಿ ಶಾಸಕರಿಗೆ ಚಿನ್ನದ ಬಿಸ್ಕತ್, ಸಿಬ್ಬಂದಿಗೆ ಬೆಳ್ಳಿತಟ್ಟೆ ಉಡುಗೊರೆ ನೀಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಈ ಸಂಬಂಧ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರಿಗೆ ವಿಧಾನಸೌಧದ ಲಾಂಛನ ಇರುವ ಚಿನ್ನದ ಬಿಸ್ಕತ್ ನೀಡುವ ಪ್ರಸ್ತಾಪವೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಸಕರಿಗೆ 50 ಸಾವಿರ ರೂ.ಮೊತ್ತದ ಚಿನ್ನದ ಬಿಸ್ಕತ್ ಮತ್ತು ಸಿಬ್ಬಂದಿಗೆ ತಲಾ 5 ಸಾವಿರ ರೂ. ಬೆಳ್ಳಿಯ ತಟ್ಟೆಯನ್ನು ಉಡುಗೊರೆ ನೀಡಲು ಉದ್ದೇಶಿಸಲಾಗಿದೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಕೋಳಿವಾಡ ಇದೇ ಸಂದರ್ಭದಲ್ಲಿ ತಿಳಿಸಿದರು.