×
Ad

ಮರಕ್ಕೆ ಢಿಕ್ಕಿ ಹೊಡೆದ ಬೈಕ್ : ಸವಾರ ಸಾವು

Update: 2017-10-16 22:40 IST

ಮಂಡ್ಯ, ಅ.16: ಬೈಕ್ ನಿಯಂತ್ರಣ ತಪ್ಪಿ ರಸ್ತೆಬದಿ ಮರಕ್ಕೆ ಢಿಕ್ಕಿಯೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಬಳಿ ರವಿವಾರ ಸಂಜೆ  ನಡೆದಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬೋರಯ್ಯ ಅವರ ಪುತ್ರ ಚೇತನ್(27) ಮೃತಪಟ್ಟವರು. 
ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯೊಡೆದಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಬೆಳಕವಾಡಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News