ಶೇಖ್ ಅಬ್ದುಲ್ ಖಾದರ್ ಸಾಹೇಬ್

Update: 2017-10-16 18:43 GMT

ಮೂಡುಬಿದಿರೆ, ಅ.16: ಅಲಂಗಾರು ನಿವಾಸಿ ಶೇಖ್ ಅಬ್ದುಲ್ ಖಾದರ್ ಸಾಹೇಬ್ (84) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅಬ್ದುಲ್ ಖಾದರ್ ಸಾಹೇಬ್ ಸರಳ, ಸಜ್ಜನ ಸ್ವಭಾವದವರಾಗಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಮಂಗಳವಾರ (ಅ.17) ಬೆಳಗ್ಗೆ 9 ಗಂಟೆಯ ಸುಮಾರಿಗೆ ಅಲಂಗಾರು ಮುಹಮ್ಮದಿ ಮಸೀದಿ ವಠಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ