ಕಾರು-ಬೈಕ್ ಅಪಘಾತ: ಓರ್ವ ಗಾಯ

Update: 2017-10-17 11:55 GMT

ಕೊಟ್ಟಿಗೆಹಾರ, ಅ.17: ಪುತ್ತೂರಿನ ಕಡಬದಿಂದ ಚಿಕ್ಕಮಗಳೂರಿನತ್ತ ಚಲಿಸುತ್ತಿದ್ದ ಬೈಕ್ ಮತ್ತು ದಾವಣಗೆರೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ ಪರಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸೋಮವಾರ ಸಂಜೆ ಚಾರ್ಮಾಡಿ ಘಾಟ್‍ನ ಮಲಯಮಾರುತ ಸಮೀಪ ನಡೆದಿದೆ.

ಬೈಕ್ ಸವಾರ ಪುತ್ತೂರಿನ ಕಡಬದ ನಿವಾಸಿ ನಾಗೇಶ್ ಗಾಯಗೊಂಡ ವ್ಯಕ್ತಿಯಾಗಿದ್ದು, ಅಪಘಾತವಾದ ಕಾರಿನಲ್ಲೇ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News