ಮೈಸೂರು: ವಿದ್ಯಾರ್ಥಿ ಆತ್ಮಹತ್ಯೆ

Update: 2017-10-17 12:04 GMT

ಮೈಸೂರು, ಅ.17: ಫಾರ್ಮಾಸಿಸ್ಟ್ ಕಲಿಯುವ ವಿದ್ಯಾರ್ಥಿಯೋರ್ವ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಪವನ್ ಕುಮಾರ್(21) ಎಂದು ಗುರುತಿಸಲಾಗಿದೆ.

ಈತ  ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಶ್ರೀಶಿವರಾತ್ರೀ ದೇಶಕೇಂದ್ರ ಬಡಾವಣೆಯಲ್ಲಿ ತನ್ನ ತಂದೆ-ತಾಯಿಯೊಂದಿಗೆ ವಾಸಿಸುತ್ತಿದ್ದ. ಕಳೆದ ಕೆಲವು ದಿನಗಳಿಂದ ತನಗೆ ಅಭ್ಯಾಸದಲ್ಲಿ ತೊಡಗಲಾಗುತ್ತಿಲ್ಲ ಎಂದು ಹೇಳುತ್ತಿದ್ದ  ಎನ್ನಲಾಗಿದೆ.

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿತ್ತು. ಇದರಿಂದ ಮನನೊಂದ ಈತ ಕಳೆದ ರಾತ್ರಿ ಊಟ ಮುಗಿಸಿ ಮಹಡಿಯ ಮೇಲಿರುವ ತನ್ನ ರೂಮಿಗೆ ತೆರಳಿದ್ದು, ಬಳಿಕ ನೇಣಿಗೆ ಶರಣಾಗಿದ್ದಾನೆ. ಬೆಳಿಗ್ಗೆ ಎಷ್ಟು ಹೊತ್ತಾದರೂ ಮಹಡಿಯಿಂದ ಇಳಿದು ಬರದ ಕಾರಣ ಮನೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಎನ್.ಆರ್.ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News