ಬೆಂಗಳೂರು: ಸರಗಳ್ಳತನ

Update: 2017-10-17 13:34 GMT

ಬೆಂಗಳೂರು, ಅ.17: ವಾಯು ವಿಹಾರ ಮಾಡುತ್ತಿದ್ದ ಮಹಿಳೆಯನ್ನು ಬೈಕ್‌ನಲ್ಲಿ ಹಿಂಬಾಲಿಸಿದ ಸರಗಳ್ಳರು 32 ಗ್ರಾಂ ಚಿನ್ನದ ಸರ ಕಳವು ಮಾಡಿರುವ ಘಟನೆ ಇಲ್ಲಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಮಾದೇವಿ (65) ಎಂಬಾಕೆ ಮಂಗಳವಾರ ಬೆಳಗ್ಗೆ 6:30ರಲ್ಲಿ ವಾಯು ವಿಹಾರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಇವರ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರ ಪೈಕಿ ಒಬ್ಬಾತ ಇವರ ಕೊರಳಿಗೆ ಕೈ ಹಾಕಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News