ಮೈಸೂರು: ದೇವಾಲಯದಲ್ಲಿ ಚಿನ್ನಾಭರಣ ಕಳವು

Update: 2017-10-17 17:15 GMT

ಮೈಸೂರು, ಅ.17: ನಗರದ ಹೊರವಲಯದ ಇಲವಾಲಾದಲ್ಲಿನ ಮೈದನ ಹಳ್ಳಿಯಲ್ಲಿರುವ ಆದಿಶಕ್ತಿ ದೇವಾಲಯದೊಳಗೆ ನುಗ್ಗಿದ ಕಳ್ಳರು ಅಪಾರ ಪ್ರಮಾಣದ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ.

ಮೈದನಹಳ್ಳಿ ಗ್ರಾಮದಲ್ಲಿರುವ ಆದಿಶಕ್ತಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವಾಲಯದ ದೇವಿಯ ವಿಗ್ರಹದ ಮೇಲಿರುವ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ. ಮಂಗಳವಾರ ಬೆಳಿಗ್ಗೆ ಅರ್ಚಕರು ಬಂದು ದೇವಾಲಯದ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು, ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದೆ.

ಈ ಬಗ್ಗೆ ಇಲವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News