ವಿದ್ಯುತ್ ಅವಘಡ: ಯುವಕ ಮೃತ್ಯು

Update: 2017-10-17 18:02 GMT

ವಿಟ್ಲ, ಅ. 17: ವಿದ್ಯುತ್ ಅವಘಡಕ್ಕೊಳಗಾಗಿ ಕೋಳಿ ಫಾರಂ ಮಾಲಿಕರೋರ್ವರು ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಮಂಗಳವಾರ ಸಂಭವಿಸಿದೆ.

ಮೃತರನ್ನು ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ದೇವಪ್ಪ ಬಂಗೇರ ಅವರ ಪುತ್ರ ರಾಜಶೇಖರ (30) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪ ಕೋಳಿ ಫಾರಂ ಉದ್ಯೋಗ ನಡೆಸುತ್ತಿದ್ದು, ತೊಕ್ಕೊಟ್ಟಿನಲ್ಲಿ ಧನ್ವಂತರಿ ಆಯುರ್ವೇದ ಮೆಡಿಕಲ್ ಶಾಪ್ ಹೊಂದಿದ್ದರು. ಬೆಳಗ್ಗೆ ಅವರು ತನ್ನ ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಫಾರಂನೊಳಗೆ ಅಳವಡಿಸಲಾದ ದೀಪದ ತಂತಿ ಸ್ಪರ್ಶಿಸಿ ಈ ಅವಘಡ ನಡೆದಿದೆ.

ತಕ್ಷಣ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ವಿವಾಹಿತರಾಗಿದ್ದ ಅವರಿಗೆ ಒಂದೂವರೆ ವರ್ಷದ ಒಂದು ಹೆಣ್ಣು ಮಗುವಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News