​ಮತದಾರರ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಕರೆ

Update: 2017-10-17 18:21 GMT

ಚಿಕ್ಕಮಗಳೂರು, ಅ.17: ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರುಗಳನ್ನು ನೋಂದಾಯಿಸಲು ವಿವಿಧ ರಾಜಕೀ ಯ ಪಕ್ಷಗಳ ಮುಂಖಡರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಹೇಳಿದ್ದಾರೆ.

ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಇದೇ ನ.7 ಕೊನೆಯ ದಿನವಾಗಿದೆ. ನ.21ರಿಂದ ಡಿ.21ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, ನೋಂದಾಯಿಸಿದ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಸಹ ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಯಾ ತಾಲೂಕು ಕಚೆೇರಿಗಳಿಗೆ ಸಲ್ಲಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ವೈಶಾಲಿ, ತಹಶೀಲ್ದಾರ್ ಪಿ.ಶಿವಣ್ಣ ಹಾಗೂ ವಿವಿಧ ಪಕ್ಷಗಳ ಮುಖಂಡರಾದ ಎಚ್.ಎಚ್. ದೇವರಾಜ್, ಚಂದ್ರಣ್ಣ ಆರಾಧ್ಯ, ಕೆ.ಟಿ. ರಾಧಾಕೃಷ್ಣ, ಮಂಜೇಗೌಡ, ವರಸಿದ್ಧಿ ವೇಣುಗೋಪಾಲ್, ಪ್ರೇಮ್‌ಕುಮಾರ್, ಹೀರೇಗೌಡ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News