ನಾಪತ್ತೆಯಾಗಿದ್ದ ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ
Update: 2017-10-18 09:24 GMT
ಕಾಸರಗೋಡು, ಅ.18: ಯುವತಿ ಮತ್ತು ಏಳು ತಿಂಗಳ ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣೆ ವ್ಯಾಪ್ತಿಯ ಬಾಡೂರಿನಲ್ಲಿ ನಡೆದಿದೆ.
ಬಾಡೂರಿನ ಪದ್ಮನಾಭ ಎಂಬವರ ಪತ್ನಿ ಶ್ರುತಿ (28) ಮತ್ತು ಪುತ್ರ ಆಯುಷ್ ( 7 ತಿಂಗಳು) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಹುಡುಕಾಡಿದಾಗ ಮನೆ ಸಮೀಪದ ಕೆರೆಯಲ್ಲಿ ತಾಯಿ, ಮಗುವಿನ ಮೃತದೇಹ ಪತ್ತೆಯಾಗಿವೆ. ಮಂಗಳವಾರ ರಾತ್ರಿ ಶ್ರುತಿ ಊಟ ಮಾಡಿ ಮಲಗಿದ್ದರು. ಬೆಳಗ್ಗೆ ಮನೆಯವರು ಎದ್ದಾಗ ಇಬ್ಬರು ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದ್ದು, ನಂತರ ಮನೆಯವರು ಶೋಧ ನಡೆಸಿದಾಗ ಕೆರೆಯಲ್ಲಿ ಮೃತದೇಹ ಕಂಡು ಬಂದಿವೆ.
ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಕುಂಬಳೆ ಪೊಲೀಸರು ಸ್ಥಳಕ್ಕಾಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಘಟನೆ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.