ಬಜಾಲ್ ಜಲ್ಲಿಗುಡ್ಡೆ: ಸಿಪಿಎಂ ಬಹಿರಂಗ ಸಭೆ

Update: 2017-10-18 12:42 GMT

ಮಂಗಳೂರು, ಅ.18: ಸಿಪಿಎಂ ಪಕ್ಷಗಳ ಬಜಾಲ್ ಜಲ್ಲಿಗುಡ್ಡೆ ಶಾಖೆಗಳ ಸಮ್ಮೇಳನದ ಅಂಗವಾಗಿ ಜಲ್ಲಿಗುಡ್ಡೆಯಲ್ಲಿ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಕಳೆದ 3 ವರ್ಷಗಳ ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರಕಾರವು ಹೆಜ್ಜೆ ಹೆಜ್ಜೆಗೂ ಜನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದೆ.

ಸಿಪಿಎಂ ನಗರ ದಕ್ಷಿಣ ಸಮಿತಿ ಸದಸ್ಯ ಪ್ರೇಮನಾಥ ಜಲ್ಲಿಗುಡ್ಡೆ ಅಧ್ಯಕ್ಷತೆ ವಹಿಸಿದ್ದರು. ಸಿಪಿಎಂ ದ.ಕ. ಜಿಲ್ಲಾ ಸಮಿತಿ ಸದಸ್ಯೆ ಜಯಂತಿ ಬಿ. ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಸಿಪಿಎಂ ಮುಖಂಡರಾದ ಸುರೇಶ್ ಬಜಾಲ್, ಮೋಹನ್ ಜಲ್ಲಿಗುಡ್ಡೆ, ಮಮತಾ ಜಲ್ಲಿಗುಡ್ಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News