ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್
Update: 2017-10-19 05:02 GMT
ಬೆಂಗಳೂರು, ಅ.19: ಅಸೌಖ್ಯದ ಕಾರಣದಿಂದಾಗಿ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜ್ವರ ಮತ್ತು ತೀವ್ರ ರಕ್ತದೊತ್ತಡ ಕಾರಣದಿಂದಾಗಿ ಬುಧವಾರ ರಾತ್ರಿ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಚೇತರಿಸಿಕೊಂಡಿರುವ ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಎಲ್ಲ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.