ಪಟಾಕಿ ದುರಂತ: ಬೆಂಗಳೂರಿನಲ್ಲಿ 11 ಜನರಿಗೆ ಗಾಯ

Update: 2017-10-19 06:24 GMT

ಬೆಂಗಳೂರು, ಅ.19: ಉದ್ಯಾನನಗರಿ ಬೆಂಗಳೂರಿನಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಸಂಭವಿಸಿದ ದುರಂತದಲ್ಲಿ ಒಟ್ಟು 11 ಜನರು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ 8 ಮಂದಿ  ನಗರದ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 6 ಮಕ್ಕಳು ಸೇರಿದ್ದಾರೆ.

ಮಿಂಟೋ  ಕಣ್ಣಿನ ಆಸ್ಪತ್ರೆಗೆ  ಮೂರು ಮಂದಿ ಗಾಯಾಳುಗಳು ದಾಖಲಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News