ಮೈಸೂರು: ಕೆರೆಯಲ್ಲಿ ವಿದ್ಯಾರ್ಥಿ ಶವ ಪತ್ತೆ

Update: 2017-10-19 14:48 GMT

ಮೈಸೂರು, ಅ.19: ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ವಿದ್ಯಾರ್ಥಿಯೋರ್ವನ ಶವ ಪತ್ತೆಯಾಗಿದ್ದು, ಪ್ರೇಮ ವೈಫಲ್ಯದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ದೀಕ್ಷಿತ್ ವಿ. ಆತ್ಮಹತ್ಯೆ ಮಾಡಿಕೊಂಡವನೆಮದು ಗುರುತಿಸಲಾಗಿದೆ.

ದೀಕ್ಷಿತ್ ಮಹಾರಾಜ ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿದ್ದ. ಈತ ತನ್ನ ಮನೆಗೆ ಮೂರು ದಿನಗಳಿಂದ ಹೋಗಿರಲಿಲ್ಲ. ಪೋಷಕರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಗುರುವಾರ ಬೆಳಗ್ಗೆ ಕುಕ್ಕರಹಳ್ಳಿ ಏರಿ ಮೇಲೆ ವಾಯು ವಿಹಾರಿಗಳು ವಾಯು ವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ನೀರಿನಲ್ಲಿ ವಿದ್ಯಾರ್ಥಿಯ ಶವ ಮೇಲೆ ತೇಲುತ್ತಿದ್ದದ್ದನ್ನು ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಕೆರೆಯಿಂದ ಹೊರ ತಂದಿದ್ದಾರೆ.

ಮೃತದೇಹ ದುರ್ವಾಸನೆ ಬರುತ್ತಿದ್ದು, ಮೈತಪಟ್ಟು ಎರಡು ದಿನ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಮೃತ ದೀಕ್ಷಿತ್ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಈ ಸಂಬಂಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News