ತೊಕ್ಕೊಟ್ಟು: ಅ. 20ರಂದು ಸಾರ್ವಜನಿಕ ಭಾಷಣ
Update: 2017-10-19 16:13 GMT
ಮಂಗಳೂರು, ಅ.19: ಜಮಾಅತೇ ಇಸ್ಲಾಮೀ ಹಿಂದ್ನ ಉಳ್ಳಾಲ ಘಟಕದ ವತಿಯಿಂದ ಅ.20ರಂದು ತೊಕ್ಕೊಟ್ಟಿನ ಮಸ್ಜಿದುಲ್ ಹುದಾದಲ್ಲಿ ಸಾರ್ವಜನಿಕ ಭಾಷಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಗ್ರಿಬ್ ನಮಾಝ್ ಬಳಿಕ ನಡೆಯುವ ಕಾರ್ಯಕ್ರಮದಲ್ಲಿ ‘ಪ್ರಸಕ್ತ ಪರಿಸ್ಥಿತಿ ಮತ್ತು ಭಾರತದ ಭವಿಷ್ಯ’ ಎಂಬ ವಿಷಯವಾಗಿ ಜಮಾಅತೇ ಇಸ್ಲಾಮೀ ಹಿಂದ್ನ ಕರ್ನಾಟಕ ರಾಜ್ಯಾಧ್ಯಕ್ಷ ಮುಹಮ್ಮದ್ ಅತ್ಹರುಲ್ಲಾ ಶರೀಫ್ ಉಪನ್ಯಾಸ ನೀಡುವರು ಎಂದು ಪ್ರಕಟನೆ ತಿಳಿಸಿದೆ.