ನ.8: ಜಿಲ್ಲಾ ಯುವಜನೋತ್ಸವ

Update: 2017-10-19 17:39 GMT

ಚಿಕ್ಕಮಗಳೂರು, ಅ.19: ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಯುವ ಪರಿಷತ್ ವತಿಯಿಂದ ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ನ.8 ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. 15ರಿಂದ 29ರ ವಯೋಮಿತಿಯ ಯುವಕ ಯುವತಿಯರಿಗೆ ಜಾನಪದ ನೃತ್ಯ, ಜನಪದ ಗೀತೆ, ಏಕಾಂಕ ನಾಟಕ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ, ಕರ್ನಾಟಕ ಶಾಸ್ತ್ರೀಯ ಗಾಯನ, ಸಿತಾರ್, ಮೃದಂಗ, ತಬಲ, ವೀಣೆ, ಕೊಳಲು, ಗಿಟಾರ್, ಹಾರ್ಮೋನಿಯಂ, ಭರತನಾಟ್ಯ, ಕುಚುಪುಡಿ, ಕಥಕ್, ಓಡಿಸ್ಸಿ, ಮಣಿಪುರಿ ಮತ್ತು ಆಶುಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಆಸಕ್ತರು ತಮ್ಮ ಹೆಸರನ್ನು ನ.7ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚಿಕ್ಕಮಗಳೂರು ದೂ.ಸಂ: 08262-220324ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News