ಅ. 25ರಂದು ಕ್ಷೇತ್ರೋತ್ಸವ, ಬರನಿರ್ವಹಣೆ ಕಾರ್ಯಾಗಾರ

Update: 2017-10-19 17:50 GMT

ಶಿವಮೊಗ್ಗ, ಅ.19: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯವು ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 25ರಂದು ಬೆಳಗ್ಗೆ 11ಗಂಟೆಗೆ ನವಿಲೆಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕ್ಷೇತ್ರೋತ್ಸವ ಹಾಗೂ ಬರನಿರ್ವಹಣೆ ಕುರಿತು ವಿಚಾರ ಸಂಕಿರಣ ಹಮ್ಮಿಕೊಂಡಿದೆ.

ಈ ವಿಚಾರ ಸಂಕಿರಣವನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ. ನಾರಾಯಣ ಗೌಡ ಉದ್ಘಾಟಿಸುವರು. ಶಾಸಕ ಹಾಗೂ ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ಕಿಮ್ಮನೆ ರತ್ನಾಕರ ಕೃಷಿ ವಸ್ತುಪ್ರದರ್ಶನವನ್ನು ಉದ್ಘಾಟಿಸುವರು. ಪ್ರಗತಿಪರ ಪುಷ್ಪಕೃಷಿಕರಾದ ಆಶಾ ಶೇಷಾದ್ರಿ ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡುವರು. ವಿವಿ ಕುಲಪತಿ ಡಾ.ಪಿ.ನಾರಾಯಣಗೌಡ ಅಧ್ಯಕ್ಷತೆ ವಹಿಸುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News