ಆತ್ಮಹತ್ಯೆ

Update: 2017-10-19 18:22 GMT

ಉಡುಪಿ, ಅ.19:  ಖಾಯಿಲೆಯಿಂದ ಬಳಲುತಿದ್ದ ವೃದ್ಧರೊಬ್ಬರು  ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ತನ್ನ ಮನೆಯಲ್ಲಿ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿಕೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ 76 ಬಡಗುಬೆಟ್ಟು ಗ್ರಾಮದಿಂದ ವರದಿಯಾಗಿದೆ.

ಇಲ್ಲಿನ  ಮುನ್ಸಿಪಲ್ ಕಾಲೋನಿಯ ನಿವಾಸಿ ವೆಲೇರಿಯನ್ ಬೆನ್ ಅಮ್ಮನ್ನ (76)  ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ಮನೆಯಲ್ಲಿ ತನ್ನ ಕುತ್ತಿಗೆಗೆ ಚಾಕುವಿನಿಂದ ತಿವಿದುಕೊಂಡಿದ್ದರು ಎಂದು ತಿಳಿದುಬಂದಿದೆ.

ಗಾಯಾಳುವನ್ನು  ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು  ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News