ಟಿಪ್ಪು ಜಯಂತಿ ಆಮಂತ್ರಣ ಪತ್ರದಲ್ಲಿ ನನ್ನ ಹೆಸರು ಹಾಕಬೇಡಿ: ಸರಕಾರಕ್ಕೆ ಅನಂತ ಕುಮಾರ್ ಹೆಗಡೆ ಮನವಿ

Update: 2017-10-20 07:11 GMT

ಹೊಸದಿಲ್ಲಿ, ಅ.20: ಮುಂದಿನ ತಿಂಗಳು ರಾಜ್ಯ ಸರಕಾರ ನಡೆಸುವ ಟಿಪ್ಪು ಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ತಮ್ಮ ಹೆಸರು ನಮೂದಿಸಬೇಡಿ ಎಂದು ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಅನಂತ ಕುಮಾರ್ ಹೆಗಡೆ ರಾಜ್ಯ ಸರಕಾರಕ್ಕೆ  ಪತ್ರ ಬರೆದಿದ್ದಾರೆ.

ಈ ಸಂಬಂಧ ಸಚಿವ ಅನಂತ ಕುಮಾರ್ ಹೆಗಡೆ ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿ ಮತ್ತು ಉತ್ತರ ಕನ್ನಡದ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಟಿಪ್ಪು ಜಯಂತಿ ಆಚರಣೆಗೆ ಹಿಂದಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದ ಅನಂತ ಕುಮಾರ್ ಹೆಗಡೆ ಅವರು “ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಕಾರಣದಿಂದಾಗಿ ನನ್ನ ಹೆಸರನ್ನು ಆಮಂತ್ರಣ ಪತ್ರದಲ್ಲಿ  ಹಾಕಬೇಡಿ’’ ಎಂದು ಅವರು ತಮ್ಮ ಆಪ್ತ ಕಾರ್ಯದರ್ಶಿ ಮೂಲಕ ಪತ್ರ ರವಾನಿಸಿದ್ದಾರೆ.
ಕಳೆದ ವರ್ಷವೂ ಅವರು ಟಿಪ್ಪು ಜಯಂತಿ ಆಚರಣೆಯ ಆಹ್ವಾನ ಪತ್ರದಲ್ಲಿ ಹೆಸರು ಹಾಕದಂತೆ  ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News