ಮಂಗಳೂರು: ಬಹರೈನ್‌ಗೆ ಗಾಂಜಾ ಸಾಗಾಟಕ್ಕೆ ಯತ್ನಿಸಿದ ಆರೋಪಿಯ ಸೆರೆ

Update: 2017-10-20 09:52 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಅ.20: ಗಾಂಜಾ ಹೊಂದಿದ ಆರೋಪದಲ್ಲಿ ಬಹರೈನ್‌ಗೆ ತೆರಳಬೇಕಿದ್ದ ಪ್ರಯಾಣಿಕರೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಬಂಧಿಸಿದ್ದಾರೆ.

ಬಡಾಜೆ ಮಂಜೇಶ್ವರದ ಅಭಿಲಾಷ್ ಪ್ರದೀಷ್ ಸುವರ್ಣ (20) ಬಂಧಿತ ಆರೋಪಿ. ಬಂಧಿತನಿಂದ ಸುಮಾರು ಒಂದು ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಅಭಿಲಾಷ್ ಇಂದು ಬೆಳಗ್ಗೆ 7:20ಕ್ಕೆ ಏರ್ ಇಂಡಿಯಾ 889 ವಿಮಾನದಲ್ಲಿ ದುಬೈಗೆ ಯಾನ ಬೆಳಸಲಿದ್ದ. ಅದಕ್ಕೂ ಮೊದಲು ಪ್ರಯಾಣಿಕರನ್ನು ಏರ್ ಇಂಡಿಯಾ ಪರಿಶೀಲಿಸಿದಾಗ ಅಭಿಲಾಷ್ ಬ್ಯಾಗಿನಲ್ಲಿ ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ಬಜ್ಪೆ ಠಾಣಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಬಹರೈನ್‌ಗೆ ಸಾಗಿಸಲು ಕೇರಳ- ಕೋಟಕ್ಕಲ್‌ನ ವ್ಯಕ್ತಿಯೋರ್ವ ಗಾಂಜಾ ನೀಡಿರುವುದಾಗಿ ಆರೋಪಿ ತನಿಖೆಯ ವೇಳೆ ಬಾಯಿ ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News