ಅ.29ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

Update: 2017-10-20 14:06 GMT

ಬೆಂಗಳೂರು, ಅ. 20: ಬೆಂಗಳೂರು ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಸತ್ಸಂಗ ಲಹರಿ ಪಾರಾಯಣೋತ್ಸವ ಮಹಾಸರ್ಪಣೆ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಅವರು ಅ.29ರಂದು ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಅ.29ರ ಮಧ್ಯಾಹ್ನ ಧರ್ಮಸ್ಥಳಕ್ಕೆ ತೆರಳಲಿರುವ ಪ್ರಧಾನಿ ಮೋದಿ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿಯೂ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ರೈಲ್ವೆ ಮಾರ್ಗದ ಲೋಕಾರ್ಪಣೆ: ಅದೇ ದಿನ ಮಧ್ಯಾಹ್ನ ಬೀದರ್‌ಗೆ ತೆರಳಿದ್ದು, ಕಲಬುರಗಿ-ಬೀದರ್ ನಡುವಿನ ಈಗಾಗಲೇ ಪೂರ್ಣಗೊಂಡಿರುವ 104 ಕಿ.ಮೀ ರೈಲ್ವೆ ಮಾರ್ಗದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದು, ಅದೇ ದಿನ ಬೀದರ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News