×
Ad

ಚಿಟ್ಟಾಣಿ ಯಕ್ಷಗಾನ ಸಪ್ತಾಹ ಉದ್ಘಾಟನೆ

Update: 2017-10-22 21:27 IST

ಉಡುಪಿ, ಅ.22: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಶ್ರೀವೀರಾಂಜನೆಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಅತಿಥಿ ಕಲಾವಿದರ ಸಹಯೋಗದೊಂದಿಗೆ ಉಡುಪಿ ಚಿಟ್ಟಾಣಿ ಅಭಿ ಮಾನಿ ಬಳಗದ ವತಿಯಿಂದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾದ ಚಿಟ್ಟಾಣಿ ಯಕ್ಷಗಾನ ಸಪ್ತಾಹವನ್ನು ಪರ್ಯಾಯ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಪೇಜಾವರ ಶ್ರೀ, ಚಿಟ್ಟಾಣಿ ರಾಮಚಂದ್ರ ರಾವ್ ಯಕ್ಷ ಗಾನ ಕಲೆಯ ಮೂಲಕ ಎಲ್ಲರ ಅಭಿಮಾನಕ್ಕೆ ಪಾತ್ರರಾಗಿ ಜನ ಸ್ಮರಣೀಯ ಸೇವೆಯನ್ನು ಸಲ್ಲಿಸಿದ್ದರು ಎಂದು ಹೇಳಿದರು.

ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀವರ್ಚನ ನೀಡಿದರು. ಮಂಗಳೂರು ವಿಶೇಷ ಆರ್ಥಿಕ ವಲಯದ ಮಾಜಿ ವ್ಯವಸ್ಥಾಪಕ ಎಸ್.ಟಿ.ಕರ್ಕೇರ, ಕೊಯಮುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಎಚ್. ದಯಾನಂದ ಮುಖ್ಯ ಅತಿಥಿಗಳಾಗಿದ್ದರು.ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಗೋಪಿಕೃಷ್ಣ ರಾವ್ ವಂದಿಸಿದರು. ನಾರಾಯಣ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪ್ರಮೀಳಾರ್ಜುನ- ಬಭ್ರುವಾಹನ ಯಕ್ಷಗಾನ ಪ್ರದರ್ಶನ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News