ನ.9 ರಿಂದ 'ದಿಲ್ಲಿ ಚಲೋ': ಸುನಂದಾ

Update: 2017-10-22 17:40 GMT

ಮಡಿಕೇರಿ, ಅ.22: ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಅಂಗನವಾಡಿ ನೌಕರರ ವಿರುದ್ಧ ನಡೆಯುತ್ತಿರುವ ಧೋರಣೆಯ ಬಗ್ಗೆ ಹೋರಾಡಲು ನವೆಂಬರ್ 9 ಮತ್ತು 10 ರಂದು ದಿಲ್ಲಿ ಚಲೋ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದಾ ಹೇಳಿದ್ದಾರೆ.

ಗೋಣಿಕೊಪ್ಪದ ಅನುದಾನಿತ ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ವೀರಾಜಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪಡೆದ ಕಾರ್ಯಕರ್ತರಾದ ಗಿರಿಜಾ, ಸುನಂದಾ ಹಾಗೂ ಜಿಲ್ಲಾ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಚೇಂದೀರ ಕಾವೇರಮ್ಮ ಅವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ನೌಕರರ ಸಂಘದ ಯೋಜನೆಗಳು ಮತ್ತು ಪ್ರಯೋಜನಗಳ ಮಾಹಿತಿಯನ್ನು ಅಂಗನವಾಡಿ ನೌಕರರಿಗೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಇ.ರಾ. ದುರ್ಗಾಪ್ರಸಾದ್ ಮಾತನಾಡಿದರು.   ವೀರಾಜಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ.ಎಸ್. ಸಮಿತ್ರಾ, ಜಿಲ್ಲಾ ಕಾರ್ಯದರ್ಶಿ ರಮೇಶ್, ಮಹದೇವ್, ಜಿಪಂ ನೌಕರರ ಸಂಘದ ಅಧ್ಯಕ್ಷ ಭರತ್, ತಾಲೂಕು ಕ್ಷೇಮನಿಧಿ ಅಧ್ಯಕ್ಷೆ ಸರೋಜಾ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News