ಗುಜರಾತ್: ಬಿಜೆಪಿ ತೊರೆದ ಪಾಟಿದಾರ್ ನಾಯಕ
Update: 2017-10-23 09:19 GMT
ಅಹ್ಮದಾಬಾದ್, ಅ.23: ಪಕ್ಷವು ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಪಾಟಿದಾರ್ ನಾಯಕ ನಿಖಿಲ್ ಸವಾನಿ ಸೋಮವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇದರಿಂದ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮತ್ತೋರ್ವ ಪಾಟಿದಾರ್ ನಾಯುಕ ನರೇಂದ್ರ ಪಟೇಲ್ ಅವರಿಗೆ ಬಿಜೆಪಿ 1 ಕೋಟಿ ರೂ.ಗಳ ಆಫರ್ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
“ಪಾಟಿದಾರ್ ಸಮುದಾಯದ ಅಭಿವೃದ್ಧಿಯ ಬಗ್ಗೆ ನೀಡಿದ್ದ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಆದ್ದರಿಂದ ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ನಾನು ಬಿಜೆಪಿ ಸೇರಿದ್ದೆ. ಆದರೆ ಬಿಜೆಪಿ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ” ಎಂದವರು ಹೇಳಿದರು.