ಇಂದಿರಾ ಕ್ಯಾಂಟಿನ್ ಉಪಾಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ: ಇಬ್ಬರ ಬಂಧನ
Update: 2017-10-23 11:46 GMT
ಬೆಂಗಳೂರು, ಅ.23: ರಾಜ್ಯ ಸರಕಾರದ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ನ ಉಪಹಾರದಲ್ಲಿ ಜಿರಳೆ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ವತ್ತಿಯಲ್ಲಿ ಆಟೊ ಚಾಲಕನಾಗಿರುವ ಹೇಮಂತ್ ಹಾಗೂ ದೇವರಾಜ್ ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ.
ನಗರದ ಕಾಮಾಕ್ಷಿಪಾಳ್ಯದ ನಿವಾಸಿಗಳಾದ ಈ ಇಬ್ಬರೂ ಪ್ರಚಾರಕ್ಕಾಗಿ ಉಪಹಾರದಲ್ಲಿ ಜಿರಳೆ ಹಾಕಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ಒಪ್ಪಿಕೊಂಡಿ ದ್ದಾರೆ ಎಂದು ಹೇಳಲಾಗುತ್ತಿದೆ.
ಅ.20ರಂದು ರಾಜರಾಜೇಶ್ವರಿನಗರದ ಕೊಟ್ಟಿಗೆಪಾಳ್ಯದ ಇಂದಿರಾ ಕ್ಯಾಂಟೀನ್ನಲ್ಲಿ ಒಂದೇ ದಿನದಲ್ಲಿ ರೈಸ್ಬಾತ್ನಲ್ಲಿ ಎರಡೆರೆಡು ಜಿರಳೆ ಸಿಕ್ಕಿತ್ತು. ಜಿರಳೆ ಸಿಕ್ಕಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಳಿಕ ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಕಾಮಾಕ್ಷಿಪಾಳ್ಯ ಪೊಲೀಸರಿಗೆ ದೂರು ನೀಡಿದ್ದರು.