ಪ್ರಧಾನಿ ಧರ್ಮಸ್ಥಳ ಭೇಟಿಗಾಗಿ ಬಂತು ವಿಶೇಷ ಕಾರು!
Update: 2017-10-27 06:31 GMT
ಮಂಗಳೂರು ಅ.27: ಪ್ರಧಾನಿ ನರೇಂದ್ರ ಮೋದಿಯವರು ಅ.29ರಂದು ಧರ್ಮಸ್ಥಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅವರಿಗಾಗಿ ವಿಶೇಷ ಕಾರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ತಲುಪಿದೆ.
ಪ್ರಧಾನಿಯು ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಧರ್ಮಸ್ಥಳಕ್ಕೆ ತೆರಳುವರು. ಈ ಹಿನ್ನೆಲೆಯಲ್ಲಿ ವಾಯುಪಡೆಯ ಪ್ರತ್ಯೇಕ ವಿಮಾನದಲ್ಲಿಂದು ಬೆಳಗ್ಗೆ ಮಂಗಳೂರಿಗೆ ಬಂದಿಳಿದಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ದೇವಳಕ್ಕೆ ಭೇಟಿ ನೀಡುವ ಅವರು ಬಳಿಕ ಉಜಿರೆಯ ರತ್ನವರ್ಮ ಹೆಗ್ಗಡೆ ಮೈದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಮಾವೇಶದಲ್ಲಿ ಭಾಗವಹಿಸುವರು. ಪ್ರಧಾನ ಮಂತ್ರಿಗಳ ಭಾಷಣದ ನೇರ ಪ್ರಸಾರಕ್ಕೂ ಅಗತ್ಯವಾದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಸಾರ್ವಜಣಿಕರಿಗೆ ವಿಶೇಷ ತಪಾಸಣೆಯ ಮೂಲಕ ಮಾತ್ರವೇ ಮೈದಾನದ ಒಳಗೆ ಹೋಗಲು ಅನುಮತಿ ನೀಡಲಾಗುತ್ತದೆ. ಈ ವೇಳೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಕೊಂಡೊಯ್ಯಬೇಕಾಗಿದೆ.