ಇಂದಿರಾ ಜನ್ಮಶತಮಾನೋತ್ಸವ ಅಂಗವಾಗಿ ರಸಪ್ರಶ್ನೆ ಸ್ಪರ್ಧೆ
Update: 2017-10-27 21:57 IST
ಬೆಂಗಳೂರು, ಅ.27: ಮಾಜಿ ಪ್ರಧಾನಿ ಇಂದಿರಾಗಾಂಧಿಯ ಜನ್ಮಶತಮಾನೋತ್ಸವದ ಅಂಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಗೌಡ, ಎನ್ಎಸ್ಯುಐ ಅಧ್ಯಕ್ಷ ಎಚ್.ಎಸ್.ಮಂಜುನಾಥ ನೇತೃತ್ವದಲ್ಲಿ ಮಹಾಲಕ್ಷ್ಮೀ ಲೇಔಟ್ನ ಸ್ವಾಮಿ ವಿವೇಕಾನಂದ ಮೈದಾನದಲ್ಲಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ಲ್ಯಾಪ್ಟಾಪ್ ಅನ್ನು ನಿಖಿಲ್, ದ್ವಿತೀಯ ಬಹುಮಾನವಾಗಿ ಟಿವಿ ಅನ್ನು ಸೋಮಶೇಖರ್ ಹಾಗೂ ತೃತೀಯ ಬಹುಮಾನವಾಗಿ ಬೈಸಿಕಲ್ ಅನ್ನು ಉಮರ್ ತಮ್ಮದನ್ನಾಗಿಸಿಕೊಂಡರು. ಸುಮಾರು 500 ವಿದ್ಯಾರ್ಥಿಗಳಿಗೆ ವಿವಿಧ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.