ಎಂ. ವಿಜಯಚಂದ್ರ
Update: 2017-11-02 16:50 GMT
ಮಂಗಳೂರು, ನ. 2: ಧಾರ್ಮಿಕ ದತ್ತಿ ಇಲಾಖೆಯಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ನಿವೃತ್ತರಾದ ಎಂ.ವಿಜಯಚಂದ್ರ (74) ಬುಧವಾರ ನಿಧನರಾದರು.
ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ, ಕೊಲ್ಲೂರು ಶ್ರೀಮುಕಾಂಬಿಕಾ, ಕಳಸ ಶ್ರೀಕಳಸೇಶ್ವರ, ಕಟೀಲು ಶ್ರೀದುರ್ಗಾಪರಮೇಶ್ವರಿ, ಕುಡುಪು ಶ್ರೀಅನಂತಪದ್ಮನಾಭ ದೇವಸ್ಥಾನ ಸಹಿತ ನಾನಾ ದೇವಾಲಯದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸೇವಾ ನಿವೃತ್ತಿ ಬಳಿಕ ಕದ್ರಿ ಮಲ್ಲಿಕಟ್ಟೆಯಲ್ಲಿರುವ ಕೆನರಾ ಕ್ಲಬ್ನಲ್ಲಿ ಮ್ಯಾನೇಜರ್ ಆಗಿಯೂ ಸೇವೆ ಸಲ್ಲಿಸಿದ್ದರು.