×
Ad

ಕಳವು ಪ್ರಕರಣ: ಆರೋಪಿಯ ಬಂಧನ

Update: 2017-11-03 20:42 IST

ಬೆಂಗಳೂರು, ನ.3: ಕಾರಿನಲ್ಲಿಟ್ಟಿದ್ದ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಇಲ್ಲಿನ ಸುಬ್ರಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ.

ಕೆಂಗೇರಿ ಉಪನಗರ ಗಾಂಧಿನಗರದ ಚಂದ್ರಶೇಖರ್ ಯಾನೆ ಚಂದು(29) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ.

ಬಂಧಿತನಿಂದ 5 ಲಕ್ಷ ರೂ. ಮೌಲ್ಯದ 32 ಗ್ರಾಂ ಚಿನ್ನದ ಸರ, ವಜ್ರದ ಪೆಂಡೆಂಟ್, ಹ್ಯಾಂಗಿಂಗ್ಸ್, ಒಂದು ಜೊತೆ ಓಲೆಗಳು, 2 ಗಡಿಯಾರಗಳು, ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ರಾಜಾಜಿನಗರದ ಫಿನಿಕ್ಸ್ ಅಪಾರ್ಟ್‌ಮೆಂಟ್ಸ್‌ಗೆ ಮದುವೆಯ ಮೆಹಂದಿ ಕಾರ್ಯಕ್ರಮಕ್ಕೆ ಬಂದಿದ್ದವರು ಹೊರಗೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಆರೋಪಿಯು ಕಳ್ಳತನ ಮಾಡಿದ್ದನು.

ಪ್ರಕರಣ ದಾಖಲಿಸಿಕೊಂಡ ರಾಜಾಜಿನಗರದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ಡಿಸಿಪಿ ಚೇತನ್ ಸಿಂಗ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News