ಮಂಗಳೂರಿನಲ್ಲಿ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಅಭಿಯಾನ
Update: 2017-11-06 10:33 GMT
ಮಂಗಳೂರು, ನ. 6: ಮಂಗಳೂರಿನಲ್ಲಿ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಅಭಿಯಾನಕ್ಕೆ ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಚಾಲನೆ ನೀಡಿದರು.
ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರ ಬಳಿ ತಲುಪಿಸುವುದೇ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಅಭಿಯಾನದ ಮುಖ್ಯ ಉದ್ದೇಶ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಈ ನಿಟ್ಟಿನಲ್ಲಿ ಪ್ರಯತ್ನಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶಕ್ತಿಮೀರಿ ಶ್ರಮಿಸಬೇಕು ಎಂದು ಎಐಸಿಸಿ ಪ್ರ ಕಾರ್ಯದರ್ಶಿ ವೇಣುಗೋಪಾಲ್ ಅವರು ತಿಳಿಸಿದರು.
ಕಾವೂರು ಜಂಕ್ಷನ್, ಆಕಾಶ ಭವನದಲ್ಲಿ ಮನೆ ಮನೆಗೆ ಭೇಟಿ ಅಭಿಯಾನದಲ್ಲಿ ಸಚಿವರಾದ ರಮಾನಾಥ ರೈ, ಯು.ಟಿ ಖಾದರ್, ಶಾಸಕ ಮೊಯ್ದಿನ್ ಬಾವ ಹಾಗೂ ಇತರರು ಈ ಸಂದರ್ಭ ಉಪಸ್ಥಿತರಿದ್ದರು.