ಪುತ್ತೂರು: ಸಿಡಿಲು ಬಡಿದು ಕೂಲಿ ಕಾರ್ಮಿಕ ಮೃತ್ಯು

Update: 2017-11-06 17:34 GMT

ಪುತ್ತೂರು, ನ. 6: ಪುತ್ತೂರು ತಾಲೂಕಿನ ಆರ್ಯಪು ಗ್ರಾಮದ ಕೂಲಿ ಕಾರ್ಮಿಕ ಹಾಗು ಹವ್ಯಾಸಿ ನಾಟಕಗಾರ ಸುಂದರ (54) ಎಂಬವರು ಸೋಮವಾರ ರಾತ್ರಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಸುಂದರ ಅವರು ಸಿಡಿಲು ಬರುತ್ತಿದ್ದ ವೇಳೆ ತನ್ನ ಮನೆಯಲ್ಲಿದ್ದರು ಎನ್ನಲಾಗಿದ್ದು, ಈ ವೇಳೆ ಸಿಡಿಲಿನ ಆಘಾತಕ್ಕೆ ಒಳಗಾಗಿ ಮೃತಪಟ್ಟರು ಎಂದು ತಿಳಿದುಬಂದಿದೆ. ಇವರು ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದು, ಹಲವು ತುಳು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News