ರಿಯಾನ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಕೊಲೆ ಪ್ರಕರಣ: 11ನೆ ತರಗತಿಯ ವಿದ್ಯಾರ್ಥಿಯ ಬಂಧನ

Update: 2017-11-08 06:36 GMT
ಪ್ರದ್ಯುಮ್ನ ಠಾಕೂರ್‌

ಹೊಸದಿಲ್ಲಿ, ನ.8:  ಹರಿಯಾಣದ ಗುರುಗ್ರಾಮದ ರಿಯಾನ್‌ ಇಂಟರ್‌ನ್ಯಾಶನಲ್‌ ಸ್ಕೂಲ್‌ ನ  ಎರಡನೇ ತರಗತಿ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್‌ನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅದೇ ಶಾಲೆಯ 11ನೆ ತರಗತಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದೆ. 

ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ಇಂದು ಅಪರಾಹ್ನ  ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಿದ್ದಾರೆ. ಸೆ.8ರಂದು 2ನೇ ತರಗತಿ ವಿದ್ಯಾರ್ಥಿ ಪ್ರದ್ಯುಮ್ನ ರಿಯಾನ್‌ ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ  ಪ್ರದ್ಯುಮ್ನ ಮೃತಪಟ್ಟಿದ್ದನು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಾಲೆಯ ಬಸ್‌ ಕ್ಲೀನರ್ ಅಶೋಕ್‌ ಕುಮಾರ್‌ ನನ್ನು ಬಂಧಿಸಿದ್ದರು. ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್‌ನ ಕೊಲೆ ಪ್ರಕರಣದ ತನಿಖೆಯನ್ನು ಬಳಿಕ ಹರಿಯಾಣ ಸರಕಾರ ಸಿಬಿಐಗೆ ಒಪ್ಪಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News